


ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಡಾ ಧನಂಜಯ ಸರ್ಜಿ ಮತ್ತು ಎಸ್ ಎಲ್ ಬೋಜೆಗೌಡ ಅವರು ಉಡುಪಿಯ ಪ್ರತಿಷ್ಠಿತ ಆಸ್ಪತ್ರೆಯಾದ ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ಹೆಸರಾಂತ ವೈದ್ಯರು ಮತ್ತು ಡಾ ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಾ ವೈದಕೀಯ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ ಅವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಬೆಂಬಲಿಸುವಂತೆ ಮತಯಾಚನೆ ಮಾಡಿದರು..
ಬಳಿಕ ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಕೆನರಾ ಸ್ಕೂಲ್ ಮತ್ತು ಶಾರದಾ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್ ಸಂಸ್ಥೆಗಳಿಗೆ ಭೇಟಿ ನೀಡಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಬೆಂಬಲಿಸಿ ಮತಹಾಕುವಂತೆ ಅಲ್ಲಿನ ಉಪನ್ಯಾಸವರ್ಗ ಮತ್ತು ಸಿಬ್ಬಂಧಿವರ್ಗದವರಲ್ಲಿ ಮತಯಾಚಿಸಿದರು.
ಉಡುಪಿಗೆ ತೆರಳಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು .ಬಳಿಕ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ದಿ. ಶ್ರೀ ಡಾ ವಿ. ಎಸ್. ಆಚಾರ್ಯ ಅವರ ಉಡುಪಿಯ ಜಿಲ್ಲೆಯ ಮಣಿಪಾಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಧರ್ಮಪತ್ನಿ ಡಾ. ಶಾಂತಾ ಆಚಾರ್ಯ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಕುಶಲೋಪಚರಿ ವಿಚಾರಿಸಿದರು. ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.




