Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಸೇತುವೆ ತಡೆಗೋಡೆಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ; ಅಪಾಯದಿಂದ ಪಾರು..!

- Advertisement -
- Advertisement -

ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿಯಾದ ಘಟನೆ ಬೆಳ್ತಂಗಡಿ ಕೊಯ್ಯರು ಸಮೀಪದ ಕಾಂತಾಜೆ ಎಂಬಲ್ಲಿನಡೆದಿದೆ.

ಬಂದಾರಿನಿಂದ ಹೊರಟು ಕೊಯ್ಯರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯರು ಸಮೀಪದ ಕಾಂತಾಜೆಯ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಢಿಕ್ಕಿಯಾಗಿದೆ.

ತಡೆಗೋಡೆ ಮುರಿದರೂ ಬಸ್ ಅಲ್ಲಿಯೇ ನಿಂತಿದ್ದು, ಅಂದಾಜು 20 ಅಡಿ ಕೆಳಗೆ ಪ್ರಪಾತಕ್ಕೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿತು. ಇದರಿಂದಾಗಿ ದೊಡ್ಡ ಅಪಾಯ ತಪ್ಪಿದಂತಾಗಿದೆ. ಪ್ರಯಾಣಿಕರು ಚಾಲಕನ ದುರ್ವತ್ರನೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!