


ಸಾವರ್ಕರ್ ಪ್ರತಿಷ್ಠಾನದಿಂದ ಮೇ 28ರಂದು ಸಂಜೆ 5.30ಕ್ಕೆ ಮೈಸೂರು ಕಲಾಮಂದಿರದಲ್ಲಿ ‘ವೀರ ಸಾವರ್ಕರ್ ಸಮ್ಮಾನ್-2024′ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ತಿಳಿಸಿದರು.
ನಗರದ ವೀರ್ ಸಾವರ್ಕರ್ ಪ್ರತಿಷ್ಠಾನದಿಂದ ಮೇ.28 ರಂದು ಇಲ್ಲಿನ ಕಲಾಮಂದಿರದಲ್ಲಿ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ ಪ್ರದಾನ ಕಾರ್ಯಕ್ರವನ್ನು ಆಯೋಜಿಸಲಾದೆ. ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ್ ಸಾವರ್ಕರ್ ವಿಚಾರಧಾರೆಗಳ ಕುರಿತು ಒಂದು ಲಕ್ಷ ನಗದು, ವೀರ ಸಾವರ್ಕರ್ ಅವರ ಪುತ್ಥಳಿ ಹಾಗೂ ಪ್ರಶಸ್ತಿ ಪತ್ರವುಳ್ಳ ಪ್ರತಿಷ್ಠಿತ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿಯನ್ನು ಮೇ 28 ರಂದು 141ನೇ ಸಾವರ್ಕರ್ ಜಯಂತಿಯಂದು ಪ್ರದಾನ ಮಾಡುತ್ತಿದೆ.
‘ಸಾವರ್ಕರ್ ಅವರ 141ನೇ ಜಯಂತಿ ಪ್ರಯುಕ್ತ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸಮ್ಮಾನ್ ಪ್ರದಾನ ಮಾಡಲಾಗುವುದು. ಇದು ₹1 ಲಕ್ಷ ನಗದು, ಸಾವರ್ಕರ್ ಪುತ್ಥಳಿ ಹಾಗೂ ಫಲಕ ಹೊಂದಿದೆ. ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಪತ್ರಕರ್ತ ಅಜಿತ್ ಹನುಮಕ್ಕನವರ್ ಪಾಲ್ಗೊಳ್ಳಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.