Saturday, June 28, 2025
spot_imgspot_img
spot_imgspot_img

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಟೂರಿಸ್ಟ್ ಬಸ್; ತಪ್ಪಿದ ಅನಾಹುತ..!

- Advertisement -
- Advertisement -

ಉಡುಪಿ: ತಾಂತ್ರಿಕ ದೋಷ ಉಂಟಾಗಿ ಟೂರಿಸ್ಟ್ ಬಸ್ ಸೇತುವೆಯಿಂದ ಢಿಕ್ಕಿ ಹೊಡೆದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರಿನ ಕೆ.ಜಿ.ರಸ್ತೆಯಲ್ಲಿ ನಡೆದಿದೆ.

ಟೂರಿಸ್ಟ್ ಬಸ್ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಉಪ್ಪೂರಿನ ಸೇತುವೆಯ ಮೇಲೆ ಸಂಚರಿಸುವಾಗ ತಾಂತ್ರಿಕ ದೋಷದಿಂದ ವಾಹನದ ಸ್ಟೇರಿಂಗ್ ಲಾಕ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದು ನಿಂತಿದೆ. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ.

ಘಟನೆಯಲ್ಲಿ ಸೇತುವೆಯ ಸುರಕ್ಷತಾ ಗೋಡೆಗೆ ತೀವ್ರ ಹಾನಿಯಾಗಿದೆ. ಸೇತುವೆಯ ಕೆಳಗೆ ಮೀನುಗಾರಿಕೆ ನಡೆಸುತ್ತಿದ್ದ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!