Sunday, June 29, 2025
spot_imgspot_img
spot_imgspot_img

ಸತ್ಯವಾದ ದೈವದ ನುಡಿ… ನ್ಯಾಯಾಲಯಕ್ಕೆ ಶರಣಾದ ಶರತ್‌ ಶೆಟ್ಟಿ ಕೊಲೆ ಆರೋಪಿ

- Advertisement -
- Advertisement -

ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಮಾರಕಾಸ್ತ್ರದಿಂದ ಇರಿದು ಶರತ್‌ ಶೆಟ್ಟಿಯನ್ನು ಕೊಲೆಗೈದ ಪ್ರಮುಖ ಆರೋಪಿ ಯೋಗೀಶ್‌ ಇದೀಗ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ.

2023 ರ ಫೆಬ್ರವರಿ 5 ರಂದು ಉಡುಪಿಯ ಪಾಂಗಳ ಪಡುವಿನಲ್ಲಿ ಬಬ್ಬು ಸ್ವಾಮಿ ದೈವಸ್ಥಾನದ ನೇಮದಲ್ಲಿ ಭಾಗವಹಿಸಿದ್ದ ಶರತ್ ಶೆಟ್ಟಿ (42) ಅವರು ದುಷ್ಕರ್ಮಿಗಳಿಗೆ ಬಲಿಯಾಗಿದ್ದರು. ಮಾತುಕತೆಗೆ ಎಂದು ಕರೆದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತಾದ್ರೂ ಆರೋಪಿಗಳು ಯಾರು ಅನ್ನೋದು ಪತ್ತೆಯಾಗಿರಲಿಲ್ಲ. ಈ ನಡುವೆ ಮನೆಯವರು ಕುಟುಂಬದ ದೈವದ ಮೊರೆ ಹೋಗಿದ್ದರು. “ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ” ಎಂದು ದೈವ ಮನೆಯವರಿಗೆ ಅಭಯ ನೀಡಿತ್ತು. ಅದರಂತೆ ಆತ ಮೇ 23ರಂದು ತಾನಾಗಿಯೇ ನ್ಯಾಯಾಲಯದ ಮುಂದೆ ಹಾಜರಾಗಿರುವುದು ವಿಶೇಷವಾಗಿದೆ.

ಕೊಲೆ ನಡೆದು 15 ತಿಂಗಳು ಕಳೆದಿದೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಲು ಪೊಲೀಸರಿಗೂ ಸಾಧ್ಯವಾಗಲಿಲ್ಲ. ಆದರೆ ತಡವಾದರೂ ದೈವದ ಮಾತು ನಿಜವಾಗಿದೆ. ತುಳುನಾಡಿನ ಸತ್ಯಗಳು ಇನ್ನೂ ಪವಾಡ ತೋರಿಸುತ್ತಿವೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇದೀಗ ಆತ ತಾನಾಗಿಯೇ ಮೇ 23ರಂದು ಉಡುಪಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾಗಿ ಶರಣಾಗಿದ್ದನು. ಬಳಿಕ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಪ್ರಕರಣದ ಪ್ರಸ್ತುತ ತನಿಖಾಧಿಕಾರಿಯಾಗಿರುವ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರು ಆರೋಪಿ ಯೋಗೀಶ್‌ನ್ನು ನ್ಯಾಯಾಂಗ ಬಂಧನದಿಂದ ಹೆಚ್ಚಿನ ತನಿಖೆ ನಡೆಸಲು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರುತ್ತಾರೆ..

- Advertisement -

Related news

error: Content is protected !!