- Advertisement -
- Advertisement -




ಮಣಿಪಾಲ: ಸಿಟಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ಸಂಜೆ ವೇಳೆ ನಡೆದಿದೆ.
ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್(78) ಮೃತ ವ್ಯಕ್ತಿ.
ಮಣಿಪಾಲದಿಂದ ಪರ್ಕಳ ಕಡೆ ಹೋಗುತ್ತಿದ್ದ ಬಸ್, ರಸ್ತೆ ದಾಟುತ್ತಿದ್ದ ಮಹಾಬಲ ಶೆಟ್ಟಿಗಾರ್ ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -