Saturday, June 28, 2025
spot_imgspot_img
spot_imgspot_img

ಇಂದು ವಿಧಾನ ಪರಿಷತ್‍ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಚುನಾವಣೆ

- Advertisement -
- Advertisement -

ವಿಧಾನ ಪರಿಷತ್ ನ ಶಿಕ್ಷಕರು ಮತ್ತು ಪದವೀಧರ 6 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ಆಯೋಗ ಸಕಲ ರೀತಿಯ ಸಿದ್ದತೆ ಮಾಡಿಕೊಂಡಿದೆ.

ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ಅನ್ನು ಎದುರಿಸುತ್ತಿದೆ. ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ, 6 ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿ ಆಡಳಿತ ಪಕ್ಷಕ್ಕೆ ತೀವ್ರ ಪೈಪೋಟಿ ನೀಡಿದೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ. ಮತದಾನ ಮಾಡುವವರು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಪಾಸ್‍ ಪೋರ್ಟ್ ಸೇರಿ ಸರ್ಕಾರದ ಅಧಿಕೃತ ಗುರುತಿನ ಚೀಟಿ ತೋರಿಸಿ ಮತದಾನ ಮಾಡಬಹುದಾಗಿದೆ.

ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 10 ಮಂದಿ ಅಭ್ಯರ್ಥಿಗಳಿದ್ದಾರೆ. 85090 ಒಟ್ಟು ಮತದಾರರಿರುವ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಧನಂಜಯ ಸರ್ಜಿ ಹಾಗೂ ಕಾಂಗ್ರೆಸ್‍ನಿಂದ ಆಯನೂರು ಮಂಜುನಾಥ್ ಸ್ಪರ್ಧಿಸುತ್ತಿದ್ದಾರೆ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿದ್ದಾರೆ. ಇನ್ನು 1,56,623 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಾ. ಚಂದ್ರಶೇಖರ ಪಾಟೀಲ್ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಮಂದಿ ಅಭ್ಯರ್ಥಿಗಳಿದ್ದಾರೆ. 1,21,860 ಒಟ್ಟು ಮತದಾರರಿದ್ದು, ಕಾಂಗ್ರೆಸ್ ನಿಂದ ರಾಮೋಜಿ ಗೌಡ ಹಾಗೂ ಬಿಜೆಪಿಯಿಂದ ಅ. ದೇವೇಗೌಡ ಚುಣವಣಾ ಅಖಾಡದಲ್ಲಿದ್ದಾರೆ.

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 15 ಮಂದಿ ಅಭ್ಯರ್ಥಿಗಳಿದ್ದಾರೆ. 25,309 ಒಟ್ಟು ಮತದಾರರು ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಿ.ಟಿ. ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈ.ಎ. ನಾರಾಯಣಸ್ವಾಮಿ ಕಣದಲ್ಲಿದ್ದಾರೆ.

ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಮಂದಿ ಅಭ್ಯರ್ಥಿಗಳಿದ್ದು, 23,402 ಮಂದಿ ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಕೆ.ಕೆ. ಮಂಜುನಾಥ್ ಸ್ಪರ್ಧಿಸಿದರೆ, ಜೆಡಿಎಸ್‍ನಿಂದ ಭೋಜೇಗೌಡ ಸ್ಪರ್ಧಿಸುತ್ತಿದ್ದಾರೆ.

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 11 ಮಂದಿ ಅಭ್ಯರ್ಥಿಗಳಿದ್ದಾರೆ. 21549 ಮಂದಿ ಒಟ್ಟು ಮತದಾರರಿದ್ದಾರೆ. ಕಾಂಗ್ರೆಸ್‍ನಿಂದ ಮರಿತಿಬ್ಬೇಗೌಡ ಹಾಗೂ ಜೆಡಿಎಸ್‍ನಿಂದ ವಿವೇಕಾನಂದ ಚುನಾವಣಾ ಕಣದಲ್ಲಿದ್ದಾರೆ.

- Advertisement -

Related news

error: Content is protected !!