Sunday, June 29, 2025
spot_imgspot_img
spot_imgspot_img

ಚಾಕುವಿನಿಂದ ಇರಿದು ಯುವಕನ ಕೊಲೆ..!

- Advertisement -
- Advertisement -

ಬೆಳಗಾವಿ: ಸ್ನೇಹಿತನ ಬರ್ತ್​​ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕ ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ್ (23) ಎಂದು ಗುರುತಿಸಲಾಗಿದೆ.

ಮಲ್ಲಿಕಾರ್ಜುನ ಎನ್ನುವ ಸ್ನೇಹಿತನ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದ ಪಾರ್ಟಿಗೆ ಯುವಕ ಹೋಗಿದ್ದನು. ಆದರೆ ಬರ್ತ್​ಡೇ ಪಾರ್ಟಿಗೆ ಆಗಮಿಸಿದ್ದ ಸ್ನೇಹಿತರ ನಡುವೆ ಗಲಾಟೆ ಆಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಬೆಳಗಾವಿ ಜಿಲ್ಲಾಸ್ಪತ್ರೆಗೆ ಯುವಕನ ಮೃತದೇಹ ರವಾನಿಸಲಾಗಿದೆ.

- Advertisement -

Related news

error: Content is protected !!