Saturday, June 28, 2025
spot_imgspot_img
spot_imgspot_img

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣ- ಬಂಧಿತ ಆರೋಪಿ ನವೀನ್‌ಗೆ ಹೈಕೋರ್ಟ್ ಜಾಮೀನು ಮಂಜೂರು

- Advertisement -
- Advertisement -

ಬೆಂಗಳೂರು : ಆರೋಪಿಯ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್​ಬುಕ್​​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿ ನವೀನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ನವೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಆರೋಪಿಯ ಜೀವಕ್ಕೆ ಅಪಾಯವಿದೆ ಎನ್ನುವ ಕಾರಣಕ್ಕೆ ಜಾಮೀನು ನೀಡದೆ ಇದ್ದರೆ ತಪ್ಪಾಗುತ್ತದೆ. ಆತನ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟ ಬಿ.ಎ.ಪಾಟೀಲ್ ನ್ಯಾಯಪೀಠವು ಆರೋಪಿ ನವೀನ್‌ಗೆ ಜಾಮೀನು ಮಂಜೂರು ಮಾಡಿತು.

ಅವಹೇಳನಕಾರಿ ಪೋಸ್ಟ್​ ಫಾರ್ವರ್ಡ್ ಮಾಡಿ ಡಿಲೀಟ್ ಮಾಡಿದ್ದಾಗಿ ಆರೋಪಿ ನವೀನ್ ಒಪ್ಪಿಕೊಂಡಿದ್ದ ಎನ್ನಲಾಗಿದೆ. ನವೀನ್ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಅಳಿಯ. ರಾಜಕೀಯವಾಗಿ ನವೀನ್‌ನ ಟಾರ್ಗೇಟ್ ಮಾಡಲಾಗಿದೆ ಎಂದು ನವೀನ್ ಪರ ವಕೀಲರು ಹೈಕೋರ್ಟ್​​ನಲ್ಲಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!