- Advertisement -
- Advertisement -



ಶಿವಮೊಗ್ಗ: ಓಮ್ನಿ ಹಾಗೂ ಟಾಟಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕ ಅಜಯ್ (21) ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ದುರ್ಘಟನೆ ಸಂಭವಿಸಿದೆ. ಜೋಗದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಓಮ್ನಿಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಸಾಗರದ ಕಡೆ ಹೊರಟಿತ್ತು. ಓಮ್ನಿಯಲ್ಲಿ ಇಬ್ಬರು, ಟಾಟಾ ಕಂಪನಿಯ ಕಾರಿನಲ್ಲಿ ಒಬ್ಬರು ಇದ್ದರು. ಓಮ್ನಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಇಬ್ಬರು ಗಾಯಾಳನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ.
- Advertisement -