Friday, June 27, 2025
spot_imgspot_img
spot_imgspot_img

ಇಂದು ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಅಮರಾವತಿ: ತೆಲುಗು ದೇ ಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇ ಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಇಂದು (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ ನಲ್ಲಿ ಬೆಳಿಗ್ಗೆ 11.27ಕ್ಕೆ ನಾಯ್ಡು ಪ್ರಮಾಣವಚನ ಸ್ವೀ ಕರಿಸಲಿದ್ದಾರೆ. ರಾಜ್ಯಪಾಲರಾದ ಎಸ್‌.ಅಬ್ದಲ್‌ ನಜೀರ್‌ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನಾಯಕರನ್ನು ಒಳಗೊಂಡ ಎನ್‌ಡಿಎ ಬಣದ ನಾಯಕರು ರಾಜ್ಯಪಾಲ ಎಸ್.ಅಬ್ದುಲ್ ನಜೀ ರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋ ದಿ ಸೇ ರಿದಂತೆ ಎನ್‌ಡಿಎ ಮೈತ್ರಿಕೂಟದ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

- Advertisement -

Related news

error: Content is protected !!