- Advertisement -
- Advertisement -


ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಾನ್ಯ ಅಲ್ಕಾ ಲಂಬಾ ರವರ ಆದೇಶದ ಮೇರೆಗೆ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ಸ್ವರೂಪ ಎನ್ ಶೆಟ್ಟಿ ರವರನ್ನು ನೇಮಕ ಮಾಡಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆರವರ ನೇತೃತ್ವದಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು ಮತ್ತು ಮಾನ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರು ಹಾಗೂ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರುವ ಹಾಗೂ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಈ ಜವಾಬ್ದಾರಿಯನ್ನು ನೀಡಲಾಗಿದೆ.

- Advertisement -








