- Advertisement -
- Advertisement -


ಒಡಿಶಾದ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿರುವ ಸಚಿವರು, ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ ಹಂಗಾಮಿ ಸ್ಪೀಕರ್ ಸಹಾಯಕ್ಕೆ ಸುರೇಶ್ ಕೋಡಿಕುನ್ನಿಲ್, ತಾಳಿಕ್ಕೋಟ್ಟೈ ರಾಜುತೇವರ್ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಸುದೀಪ್ ಬಂದೋಪಾಧ್ಯಾಯ ಇವರುಗಳನ್ನು ನೇಮಕ ಮಾಡಲಾಗಿದೆ. ಹೊಸ ಸ್ಪೀಕರ್ ಆಯ್ಕೆವರೆಗೂ ಕಾರ್ಯ ನಿರ್ವಹಣೆ ಮಾಡಲಿದ್ದಾರೆ ಎಂದು ರಿಜಿಜು ಬರೆದುಕೊಂಡಿದ್ದಾರೆ.
- Advertisement -