Friday, June 27, 2025
spot_imgspot_img
spot_imgspot_img

ಗಂಗೊಳ್ಳಿ: ಸೊಸೈಟಿಗೆ ನುಗ್ಗಿ ಕಳ್ಳತನಕ್ಕೆ ಯತ್ನ: ಖತಾರ್ನಕ್‌ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು

- Advertisement -
- Advertisement -

ಗಂಗೊಳ್ಳಿ: ಕಳ್ಳತನ ಮಾಡುತ್ತಿರುವಾಗಲೇ ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಕಳ್ಳನ ಸೆರೆಯಾದ ಕುತೂಹಲಕಾರಿ ಘಟನೆ ಗಂಗೊಳ್ಳಿಯ ಮುಳ್ಳಿಕಟ್ಟೆ ಎಂಬಲ್ಲಿ ನಡೆದಿದೆ.

ಹೊಸಾಡು ಶಾಖೆಯ ಪಂಚಗಂಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಕಿಟಿಕಿಯ ಸರಳು ಮುರಿದು ಕಳ್ಳತನ ನಡೆದಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿದ 10 ನಿಮಿಷದಲ್ಲೇ ಕಳ್ಳನ ಹೆಡೆಮುರಿ ಕಟ್ಟಿದ್ದಾರೆ.

ರಾತ್ರಿ ಸುಮಾರು 1.47 ಕ್ಕೆ ಮುಳ್ಳಿಕಟ್ಟೆಯಲ್ಲಿರುವ ಸಹಕಾರಿ ಸಂಘದ ಕಿಟಕಿಯ ಗ್ರಿಲ್ ಒಡೆದು ಕಳ್ಳ ಒಳನುಗ್ಗಿದ್ದಾನೆ . ಕುಂದಾಪುರ ಅಂಕದಕಟ್ಟೆಯಲ್ಲಿರುವ ಸೈನ್ ಇನ್ ಸೆಕ್ಯುರಿಟಿಯ ಸಿಸಿಟಿವಿ ಲೈವ್ ಮಾನಿಟರಿಂಗ್ ನಲ್ಲಿ ಘಟನೆ ಬೆಳಕಿಗೆ ಬಂದು ಬೀಟ್ ಪೊಲೀಸರಿಗೆ ಮಾಹಿತಿ ನೀಡಲಾಯಿತು.
10 ನಿಮಿಷದಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿ ಕಳ್ಳನನ್ನು ಹಿಡಿದರು. ಕಳ್ಳ ಕೇರಳದಿಂದ ಬಂದವನು ಎನ್ನಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಕುರಿತು ತನಿಖೆ ನಡೆಯುತ್ತಿದೆ.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಲೈವ್ ಮಾನಿಟರಿಂಗ್ ಸಿಬ್ಬಂದಿ, ಗಂಗೊಳ್ಳಿ ಪೊಲೀಸರ ಸಮಯಪ್ರಜ್ಞೆಯಿಂದ ಕಳ್ಳನನ್ನು ತಕ್ಷಣ ಸೆರೆ ಹಿಡಿಯಲು ಸಾಧ್ಯವಾಗಿದೆ.

- Advertisement -

Related news

error: Content is protected !!