- Advertisement -
- Advertisement -


ಬೆಳ್ತಂಗಡಿ: ವ್ಯಕ್ತಿಯೋರ್ವರು ತಮ್ಮ ಮೋಟಾರ್ ಸೈಕಲ್ನ್ನು ರಸ್ತೆಯ ಬದಿ ನಿಲ್ಲಿಸಿ ಹೋದವರು ವಾಪಾಸು ಹಿಂತಿರುಗಿ ಬಂದು ನೋಡಿದಾಗ ಯಾರೋ ಕಳ್ಳರು ಕಳವು ಮಾಡಿದ ಘಟನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ.
ರಾಜೇಶ್ ಕುಲಾಲ್ ಎಂಬವರ ದೂರಿನಂತೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಶ್ರೀ ಗಣೇಶ್ ಸ್ಟೋರ್ ಅಂಗಡಿ ಎದುರು ರಸ್ತೆಯ ಬದಿಯಲ್ಲಿ ತನ್ನ ಮೋಟಾರ್ ಸೈಕಲ್ನ್ನು ನಿಲ್ಲಿಸಿ ಹೋದವರು, ವಾಪಾಸು ಒಂದು ಗಂಟೆಯ ಬಳಿಕ ಹಿಂತಿರುಗಿ ಬಂದು ನೋಡಿದಾಗ ಮೋಟಾರ್ ಸೈಕಲ್ ಅವರು ನಿಲ್ಲಿಸಿದ್ದ ಜಾಗದಲ್ಲಿ ಇಲ್ಲದೇ ಇದ್ದು, ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ. ಸುತ್ತಮುತ್ತ ಹುಡುಕಲಾಗಿ ಎಲ್ಲಿಯೂ ಪತ್ತೆಯಾಗಿರುವುದಿಲ್ಲ. ಕಳವಾದ ಮೋಟಾರ್ ಸೈಕಲ್ ನ ಅಂದಾಜು ಮೌಲ್ಯ ರೂ 30000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
- Advertisement -