Sunday, June 29, 2025
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಕೇಸ್ : ಅಶ್ಲೀಲ ಮೆಸೇಜ್ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸೋನು ಗೌಡ & ಚಿತ್ರಾಲ್ ರಂಗಸ್ವಾಮಿ

- Advertisement -
- Advertisement -

ರೇಣುಕಾಸ್ವಾಮಿ ಕೊಲೆ ಕೇಸ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದ್ದು,. ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂದು ನಟಿಯೊಬ್ಬರು ಹೇಳಿಕೆ ಕೊಟ್ಟ ಬೆನ್ನಲ್ಲೇ ಸೋನು ಗೌಡ ಕೂಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ದರ್ಶನ್ ಗೆಳತಿ, ನಟಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ನಡೆದಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಮಾಹಿತಿ ಹೊರಬಿದ್ದಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ನಟ ದರ್ಶನ್ ಜೈಲಿಗೆ ಹೋದ ಬಳಿಕ ಕೊಲೆಯಾದ ರೇಣುಕಾಸ್ವಾಮಿ ನನಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಅಂತ ಸೋನು ಗೌಡ ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ಲದೇ ರೇಣುಕಾಸ್ವಾಮಿ ಕ್ರಿಯೇಟ್ ಮಾಡಿದ್ದಾನೆ ಎನ್ನಲಾಗಿರುವ ಫೇಕ್ ಅಕೌಂಟ್ ನಿಂದ ನನಗೂ ಕೂಡ ಕೆಟ್ಟದಾಗಿ ಮೆಸೇಜ್ ಬಂದಿದೆ ಅಂತ ತನ್ನದೇ ಯ್ಯೂಟೂಬ್ ಚಾನೆಲ್ ನಲ್ಲಿ ಸೋನು ಗೌಡ ಹೇಳಿಕೊಂಡಿದ್ದಾರೆ.ಇತ್ತೀಚೆಗೆ ಯ್ಯೂಟೂಬ್ ನಲ್ಲಿ ನಾನು ಕೂಡ ಒಂದು ವಿಡಿಯೋ ನೋಡಿದೆ. ಅದೇ ಅಕೌಂಟ್ನಿಂದ ಸಾಕಷ್ಟು ಹುಡುಗಿಯರಿಗೆ ರೇಣುಕಾಸ್ವಾಮಿ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡಿದ್ದಾನೆ. ಹಾಗಾಗಿ ನಾನೂ ನನ್ನ ಫೋನ್ ನಲ್ಲಿ ಚೆಕ್ ಮಾಡಿದೆ. ಆಗ ಆ ಯಪ್ಪ ನನಗೂ ಮೆಸೇಜ್ ಮಾಡಿದ್ದಾರೆ ಅನ್ನೋದು ಗೊತ್ತಾಯ್ತು ಎಂದು ಸೋನು ಗೌಡ ಹೇಳಿದ್ದಾರೆ.

ನಟಿ ಚಿತ್ರಾಲ್ ಗೂ ಕೂಡ ರೇಣುಕಾಸ್ವಾಮಿ ಸಂದೇಶ ಕಳುಹಿಸಿದ್ದರಂತೆ, ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೇಟ್ ಕೂಡ ಆಗಿದೆ. ಗೌತಮ್ ಎನ್ನುವ ಹೆಸರಿನಲ್ಲಿ ‌ಮೆಸೇಜ್ ಮಾಡಿದ್ದರು ಎಂದು ನಟಿ ಕೂಡ ಹೇಳಿದ್ದಾರೆ. ಈ ಅಕೌಂಟಿನಿಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೂ ಇದನ್ನು ಕಂಡು ಅಚ್ಚರಿ ಆಯಿತು ಎಂದು ನಟಿ ಚಿತ್ರಾಲ್ ರಂಗಸ್ವಾಮಿ ಹೇಳಿದ್ದರು. ಬಿಗ್ಬಾಸ್ ಖ್ಯಾತಿಯ ನಟಿ ಚಿತ್ರಾಲ್ ರಂಗಸ್ವಾಮಿ ಈ ಬಗ್ಗೆ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಿ ರೇಣುಕಾಸ್ವಾಮಿ ಅವರದ್ದು ಎನ್ನಲಾದ ಅಕೌಂಟ್ ಫೋಟೋವನ್ನು ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿ ವಿವರಣೆ ನೀಡಿದ್ದಾರೆ.

ಆತ ತಪ್ಪು ಮಾಡಿದ್ದಾನೆ ಅಂತ ಅವರ ಕುಟುಂಬಕ್ಕೆ ನಾನು ಏನು ಹೇಳೋದಿಲ್ಲ. ನನಗೂ ಕೆಟ್ಟದಾಗಿ ಅನೇಕರು ಕಮೆಂಟ್ ಮಾಡುತ್ತಾರೆ. ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಕಮೆಂಟ್ ಮಾಡಿದ್ರೆ ಸುಮ್ಮನೆ ಇರ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -

Related news

error: Content is protected !!