- Advertisement -
- Advertisement -



ಹೆಬ್ರಿ: ವ್ಯಕ್ತಿಯೋರ್ವರು ಸೊಪ್ಪು ಕಡಿಯುತ್ತಿದ್ದ ವೇಳೆ ಅಕಸ್ಮಿಕವಾಗಿ ಕಾಲು ಜಾರಿ ಮರದಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬೈರಂಪಳ್ಳಿ ಗ್ರಾಮದ ಗೋಪಾಲ(32) ಎಂದು ಗುರುತಿಸಲಾಗಿದೆ.
ಇವರು ಅಡಿಕೆ ಮರದ ಬುಡಕ್ಕೆ ಸೊಪ್ಪನ್ನು ಹಾಕಲು ಮಾವಿನ ಮರವನ್ನು ಹತ್ತಿ ಸೊಪ್ಪನ್ನು ಕೊಯ್ಯುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -