Saturday, June 28, 2025
spot_imgspot_img
spot_imgspot_img

ಮಂಗಳೂರು ಉಳಾಯಿಬೆಟ್ಟು ದರೋಡೆ ಪ್ರಕರಣ ಭೇದಿಸಿದ ಪೊಲೀಸರು ; ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿ ಹತ್ತು ಮಂದಿ ಅರೆಸ್ಟ್‌

- Advertisement -
- Advertisement -

ಮಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಉಳಾಯಿಬೆಟ್ಟು ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣ ಸಂಬಂಧಿಸಿ ಮಂಗಳೂರು ಪೊಲೀಸರು ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಿದ್ದಾರೆ.

ಯಾವುದೇ ಸುಳಿವು ಕೊಡದೆ ಎಸ್ಕೆಪ್ ಆಗಿದ್ದ ಆರೋಪಿಗಳ ಪತ್ತೆಗಾಗಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಕಂಕನಾಡಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್, ಎಸಿಪಿ ಗೀತಾ ಮತ್ತು ಸಿಸಿಬಿ ತಂಡಗಳು ಪ್ರತ್ಯೇಕವಾಗಿ ತನಿಖೆ ನಡೆಸಿದ್ದವು. ಆರಂಭದಲ್ಲಿ ಬಂಟ್ವಾಳ ಮೂಲಕ ಕಾರು ತೆರಳಿರುವುದು ಪತ್ತೆಯಾಗಿತ್ತು. ಆನಂತರ ತನಿಖೆ ವೇಳೆ ತಲಪಾಡಿ ಮೂಲಕ ಆರೋಪಿಗಳು ಪರಾರಿಯಾಗಿದ್ದು ತಿಳಿದುಬಂದಿತ್ತು.

ನೀರುಮಾರ್ಗ ನಿವಾಸಿಗಳಾದ ವಸಂತ ಕುಮಾರ್ (42), ರಮೇಶ ಪೂಜಾರಿ(42), ರೇಮಂಡ್ ಡಿಸೋಜ47), ಪೈವಳಿಕೆ ಕುರುಡಪದವು ನಿವಾಸಿ ಬಾಲಕೃಷ್ಣ ಶೆಟ್ಟಿ(48), ತೃಶೂರು ಜಿಲ್ಲೆಯ ಜಾಕಿರ್ ಯಾನೆ ಶಾಕೀರ್ (56), ವಿನೋಜ್ (38), ಸಜೀಶ್ (32), ಸತೀಶ್ ಬಾಬು(44), ಶಿಜೋ ದೇವಸ್ಸಿ (38), ತಿರುವನಂತಪುರ ಜಿಲ್ಲೆಯ ಬಿಜು (41) ಬಂಧಿತರು.

ತೀರಾ ಪರಿಚಿತರದ್ದೇ ಪ್ಲಾನ್‌….
ತನಿಖೆಯ ಸಂದರ್ಭದಲ್ಲಿ ಪದ್ಮನಾಭ ಕೋಟ್ಯಾನ್ ಜೊತೆಗೆ ಲಾರಿ ಚಾಲಕನಾಗಿದ್ದ ನೀರುಮಾರ್ಗ ನಿವಾಸಿ ವಸಂತ ಪೂಜಾರಿ ಬಗ್ಗೆ ಶಂಕೆ ಉಂಟಾಗಿತ್ತು. ಕೋಟ್ಯಾನ್ ಮನೆಯಲ್ಲಿ ಕೋಟಿಗಟ್ಟಲೆ ಹಣ ಇದೆಯೆಂದು ಸ್ಥಳೀಯ ರೇಮಂಡ್ ಡಿಸೋಜ ಎಂಬವರ ಜೊತೆಗೆ ಚರ್ಚೆ ಮಾಡಿದ್ದರು. ಇದರಂತೆ, ಕೋಟ್ಯಾಂತರ ಹಣವನ್ನು ಲೂಟಿ ಮಾಡಲು ರೇಮಂಡ್ ಪ್ಲಾನ್‌ ಹಾಕಿದ್ದರು. ಇದಕ್ಕಾಗಿ ಕಾಸರಗೋಡು ಜಿಲ್ಲೆಯ ಪೈವಳಿಕೆ ಬಾಲಕೃಷ್ಣ ಶೆಟ್ಟಿ ಮತ್ತು ಕೆಲವು ಕೇರಳ ಮೂಲದ ಆರೋಪಿಗಳನ್ನು ಸಂಪರ್ಕ ಮಾಡಿದ್ದ. ಮನೆ ಬಗ್ಗೆ ಸಂಪೂರ್ಣ ಮಾಹಿತಿ ವಸಂತ ಆರೋಪಿಗಳಿಗೆ ಮಾಹಿತಿ ನೀಡಿದ್ದ.

ಮನೆಯಲ್ಲಿ 100 ಕೋಟಿ ನಗದು ಇದೆಯೆಂದು ಕೇರಳ ತಂಡಕ್ಕೆ ರೇಮಂಡ್ ಡಿಸೋಜ ಮಾಹಿತಿ ನೀಡಿದ್ದ. ಇದಕ್ಕಾಗಿ ಆರೋಪಿಗಳು 15ರಷ್ಟು ಚೀಲಗಳನ್ನು ರೆಡಿ ಮಾಡಿಕೊಂಡು ಬಂದಿದ್ದರು. ಜಾಕೀರ್ ಹುಸೇನ್ ತನಿಖೆಯ ದಿಕ್ಕು ತಪ್ಪಿಸಲು ಹಿಂದಿ ಭಾಷೆ ಮಾತನಾಡುತ್ತ ಪದ್ಮನಾಭ ಕೋಟ್ಯಾನ್ ಮೇಲೆ ಹಲ್ಲೆ ಮಾಡಿದ್ದ. ಇತರರು ಮನೆಯವರನ್ನು ಬೆದರಿಸಿ ಹಣ ಎಲ್ಲಿದೆ ಎಂದು ಹುಡುಕಾಟ ನಡೆಸಿದ್ದರು. ಆರೋಪಿಗಳಿಂದ 9 ಲಕ್ಷ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನಾಲ್ಕು ಜನರನ್ನು ನಿನ್ನೆ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಇವತ್ತು ಆರು ಮಂದಿಯನ್ನು ಅರೆಸ್ಟ್ ಮಾಡಿದ್ದೇವೆ ಎಂದು ಸುದ್ದಿಗೋಷ್ಟಿಯಲ್ಲಿ ಕಮಿಷನರ್‌ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಕೊನೆಗೆ ಕೇರಳ ತಂಡಕ್ಕೆ 300 ಕೋಟಿ ನಗದು ಇದೆಯೆಂದು ಮಾಹಿತಿ ರವಾನೆಯಾಗಿತ್ತು. ಕೋಟ್ಯಾನ್ ಮಲಗುತ್ತಿದ್ದ ಬೆಡ್ ಅಡಿಭಾಗದಲ್ಲಿ ನಗದು ಹಣ ಇದೆಯೆಂದು ಶಂಕೆಯಲ್ಲಿ ಆರೋಪಿಗಳ ತಂಡ ಆರು ತಿಂಗಳಿನಿಂದ ಸ್ಕೆಚ್ ಹಾಕಿತ್ತು. ಭಾರೀ ಹಣ ಇದೆಯೆಂದು ದರೋಡೆ ಬಗ್ಗೆ ಸಾಕಷ್ಟು ಮುಂಜಾಗ್ರತೆ ವಹಿಸಿ ಸಂಚು ನಡೆಸಿತ್ತು. ಜೂನ್ 18ರಂದು ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಕೈಬಿಟ್ಟು ಬಳಿಕ ಎರಡು ದಿನ ಬಿಟ್ಟು 21ರಂದು ಸಂಜೆಯೇ ಮನೆ ಹೊಕ್ಕಿದ್ದರು. ದರೋಡೆ ಪ್ರಕರಣ ಮಂಗಳೂರು ಪೊಲೀಸರಿಗೆ ಭಾರೀ ಸವಾಲಾಗಿ ಪರುಣಮಿಸಿತ್ತು.

- Advertisement -

Related news

error: Content is protected !!