Saturday, June 28, 2025
spot_imgspot_img
spot_imgspot_img

ಮಣಿಪಾಲ : ಸಿಎ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಮಣಿಪಾಲ : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮೃತರನ್ನು ಶ್ರೀನಿಧಿ (20) ಎಂದು ಗುರುತಿಸಲಾಗಿದೆ.

ಹರಂದೂರು ಗ್ರಾಮ, ಕೊಪ್ಪ ತಾಲೂಕು, ಚಿಕ್ಕಮಗಳೂರಿನ ನಿವಾಸಿ ಶ್ರೀನಿಧಿ ಯವರ ತಂದೆ ಡಯಾಲಿಸ್ ಗಾಗಿ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದಕ್ಕಾಗಿ ಉಡುಪಿ ತಾಲೂಕು ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಶ್ರೀನಿಧಿಯವರು ದಿನಾಂಕ: 05.07.2024 ರಂದು ಸಂಜೆ 04:30 ಗಂಟೆಯಿಂದ 06:00 ಗಂಟೆಯ ಮಧ್ಯಾವಧಿಯಲ್ಲಿ ತಂದೆ ಹಾಗೂ ತಾಯಿ ಉಡುಪಿಗೆ ಸಾಮಾಗ್ರಿಗಳನ್ನು ಖರೀದಿಸಲು ಹೋದಾಗ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆ ಹೊಂದಿ ತಾನು ವಾಸವಿರುವ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ಯು.ಡಿ.ಆರ್ ಕ್ರಮಾಂಕ 31/2024 ಕಲಂ: 194 BNSS ನಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!