Saturday, June 28, 2025
spot_imgspot_img
spot_imgspot_img

ರಾಜ್ಯದಲ್ಲಿ ಮುಂದುವರಿದ ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಲ್ಲಿ ಸೋಂಕು ದೃಢ

- Advertisement -
- Advertisement -

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು , ಕಳೆದ 24 ಗಂಟೆಯಲ್ಲಿ 293 ಜನರಿಗೆ ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 7,840ಕ್ಕೆ ಏರಿಕೆ ಆಗಿದೆ.

24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 7 ಮತ್ತು ಬಿಬಿಎಂಪಿ ವ್ಯಾಪ್ತಿಯಲ್ಲಿ 118 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7840ಕ್ಕೆ ಏರಿಕೆ ಆಗಿದೆ. ಇದುವರೆಗೆ ರಾಜ್ಯದಲ್ಲಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಮಳೆಗಾಲದಲ್ಲೇ ಡೆಂಗ್ಯೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಹೀಗಾಗಿ ನೀರು ನಿಲ್ಲದಂತೆ ಸ್ವಚ್ಛತೆಗೆ ಆದ್ಯತೆ, ಸೊಳ್ಳೆಗಳ ನಾಶಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪ್ರತಿ ಜಿಲ್ಲೆಯಲ್ಲಿ 10 ಪ್ರತ್ಯೇಕ ಡೆಂಗ್ಯೂ ವಾರ್ಡ್ ತೆರೆಯಬೇಕು. ಡೆಂಗ್ಯೂ ಕಂಟ್ರೋಲ್​ಗೆ ಟಾಸ್ಕ್​ಫೋರ್ಸ್ ರಚನೆ ಮಾಡಬೇಕು. ಕೊಳಗೇರಿ ಪ್ರದೇಶದಲ್ಲೇ ಹೆಚ್ಚು ಡೆಂಗ್ಯೂ ವ್ಯಾಪಿಸಿದೆ. ಹೀಗಾಗಿ ಸ್ಲಂ ನಿವಾಸಿಗಳಿಗೆ ಉಚಿತವಾಗಿ ಸೊಳ್ಳೆ ಪರದೆ ವಿತರಣೆ ಮಾಡುವಂತೆ ಸೂಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಕಂಟ್ರೋಲ್​ಗೆ ಟಾಸ್ಕ್ ಫೋರ್ಸ್
ಡೆಂಗ್ಯೂ ಕ್ರೌರ್ಯ ಸರ್ಕಾರವನ್ನೂ ನಡುಗುವಂತೆ ಮಾಡಿದೆ. ಐಎಎಸ್​ ಅಧಿಕಾರಿಗಳಿಗೆ ಬಿಸಿ ತಾಕಿಸಿದ್ದ ಸಿಎಂ, ನಿನ್ನೆ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು.

- Advertisement -

Related news

error: Content is protected !!