

ಸಂಸದೆ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತೆಗೆದುಕೊಂಡು ಬರಬೇಕು ಎಂದು ಹೇಳಿದ್ದು, ಇದೀಗ ಈ ಹೇಳಿಕೆಯು ವಿವಾದ ಸೃಷ್ಟಿಸಿದೆ.
ಮಂಡಿ ಲೋಕಸಭಾ ಕ್ಷೇತ್ರದ ಜನರು ನನ್ನನ್ನು ಭೇಟಿಯಾಗಲು ಬಯಸಿದರೆ ಅವರು ಆಧಾರ್ ಕಾರ್ಡ್ ತಂದರೆ ಒಳ್ಳೆಯದು. ಇದರಿಂದ ಅವರು ನನ್ನ ಕ್ಷೇತ್ರದವರೇ ಅಥವಾ ಬೇರೆ ಕ್ಷೇತ್ರದವರೇ ಎಂದು ತಿಳಿಯುತ್ತದೆ ಎಂದು ಕಂಗನಾ ಹೇಳಿದ್ದಾರೆ.
ಕಂಗನಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಚಿವ ವಿಕ್ರಮಾದಿತ್ಯ ಸಿಂಗ್, ತಮ್ಮ ಆಧಾರ್ ಕಾರ್ಡ್ ತರಬೇಕು. ಸ್ವಂತ ರಾಜ್ಯದವರೇ ಆಗಿರಲಿ, ಪ್ರವಾಸಿಗರೇ ಇರಲಿ, ಸಾರ್ವಜನಿಕ ಪ್ರತಿನಿಧಿಗಳು ಎಲ್ಲರನ್ನೂ ಭೇಟಿಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಆಧಾರ್ ಕಾರ್ಡ್ ಹೊಂದಿರುವುದು ಅವಶ್ಯಕ. ಇದರಿಂದ ನೀವು ಯಾವುದೇ ಅನಾನುಕೂಲತೆಯನ್ನು ಎದುರಿಸುವುದಿಲ್ಲ. ನೀವು ಮೇಲಿನ ಹಿಮಾಚಲ ಪ್ರದೇಶದವರಾಗಿದ್ದರೆ ನಮ್ಮ ಕುಲು ಮನಾಲಿ ಮನೆಗೆ ಬನ್ನಿ. ನೀವು ಮಂಡಿಯವರಾಗಿದ್ದರೆ ಮಂಡಿ ಕಚೇರಿಗೆ ಬನ್ನಿ. ನೀವು ಹಿಮಾಚಲದ ಕೆಳಗಿನವರಾಗಿದ್ದರೆ ಸದಾ ಘಾಟ್ನಲ್ಲಿರುವ ನನ್ನ ಕಚೇರಿಗೆ ಬನ್ನಿ. ಕೆಲಸದ ವಿಚಾರವಾಗಿ ಯಾರನ್ನಾದರೂ ಖುದ್ದಾಗಿ ಭೇಟಿಯಾದರೆ ತುಂಬಾ ಒಳ್ಳೆಯದು. ಜನರು ತಮ್ಮ ಸಮಸ್ಯೆಗಳನ್ನು ಅಂಚೆ ಮೂಲಕವೂ ಹೇಳಬಹುದು ಎಂದು ಕಂಗನಾ ತಿಳಿಸಿದ್ದರು.