Sunday, June 29, 2025
spot_imgspot_img
spot_imgspot_img

ವಿಟ್ಲ: (ಜು.13) ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ದ.ಕ ಇದರ ಹತ್ತನೇ ಶಾಖೆ ಉದ್ಘಾಟನಾ ಸಮಾರಂಭ

- Advertisement -
- Advertisement -

ವಿಟ್ಲ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ದ.ಕ ಇದರ ಹತ್ತನೇ ಶಾಖೆ ವಿಟ್ಲದ ಎಂಪಾಯರ್‌ ಮಹಲ್‌‌ನಲ್ಲಿ ಶುಭಾರಂಭಗೊಳ್ಳಲಿದ್ದು, ಉದ್ಘಾಟನಾ ಸಮಾರಂಭ ಜುಲೈ 13 ನೇ ಶನಿವಾರ ನಡೆಯಲಿದೆ.

ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ, ಕಾವೂರು ಮಂಗಳೂರು ಇವರು ದೀಪ ಪ್ರಜ್ವಲಿಸಿ, ಆಶೀರ್ವಚನ ನೀಡಲಿದ್ದಾರೆ.
ಚಿದಾನಂದ ಬೈಲಾಡಿ, ಅಧ್ಯಕ್ಷರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘ ನಿ.ಪುತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಜೀವ ಮಠಂದೂರು, ಮಾಜಿ ಶಾಸಕರು, ಶಶಿಕುಮಾರ್‌ ರೈ ಬಾಲ್ಯೊಟ್ಟು, ನಿರ್ದೇಶಕರು ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ಹೆಚ್‌.ಎನ್‌ ರಮೇಶ್‌ ಸಹಕಾರ ಸಂಘಗಳ ಉಪನಿಬಂಧಕರು, ಮಂಗಳೂರು, ಜಯಂತ ಪಿ.ಹೆಚ್‌ ಸದಸ್ಯರು ಪಟ್ಟಣ ಪಂಚಾಯತ್‌ ವಿಟ್ಲ, ರವಿ ಮುಂಗ್ಲಿಮನೆ, ಅಧ್ಯಕ್ಷರು ಒಕ್ಕಲಿಗ ಗೌಡ ಸೇವಾ ಸಂಘ (ರಿ) ಪುತ್ತೂರು, ಕೆ. ಮೋನಪ್ಪ ಗೌಡ ಶಿವಾಜಿನಗರ, ಅಧ್ಯಕ್ಷರು ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ವಿಟ್ಲ, ಪೀಟರ್‌ ಪ್ರಾನ್ಸಿಸ್‌ ಲಾಸ್ರಾದೋ, ಮಾಲ್ಹಕರು ಎಂಪೈರ್‌ ಮಹಲ್‌, ವಿಟ್ಲ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!