Friday, June 27, 2025
spot_imgspot_img
spot_imgspot_img

ಸೌತಡ್ಕ: ಸತ್ತ ಕರುವನ್ನು ಮೋರಿಗೆ ಎಸೆದ ಕಿಡಿಗೇಡಿಗಳು: ಹಿಂ.ಜಾ. ವೇದಿಕೆ , ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

- Advertisement -
- Advertisement -

ಸೌತಡ್ಕ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕದಿಂದ ಪಟ್ಟೂರಿಗೆ ಹೋಗುವ ರಸ್ತೆಯ ಬಳಿ ನೀರು ಹರಿವ ಮೋರಿಯಲ್ಲಿ ಸತ್ತ ದನದ ಕರುವೊಂದನ್ನು ಎಸೆದು ಹೋಗಿರುವ ಘಟನೆ ಜು.15ರಂದು ಬೆಳಕಿಗೆ ಬಂದಿದೆ.

ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಬಗ್ಗೆ ವರದಿಯಾಗಿದೆ.

ಕೊಕ್ಕಡದ ಸೌತಡ್ಕ ಬಳಿ ಅಪರಿಚಿತರು ಸತ್ತ ಕರುವೊಂದನ್ನು ಮೋರಿಗೆ ಎಸೆದು ಹೋಗಿದ್ದು ಈ ಬಗ್ಗೆ ಮಾಹಿತಿ ಪಡೆದ ಕೊಕ್ಕಡ ಪಿಡಿಓ ಅವರು ಕರುವಿನ ಅಂತ್ಯ ಸಂಸ್ಕಾರ ಮಾಡುವ ಉದ್ದೇಶದಿಂದ ಕೊಕ್ಕಡದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣ ಸ್ಪಂದಿಸಿದ ಸಂಘಟನೆಯ ಕಾರ್ಯಕರ್ತರು ಸತ್ತ ಕರುವನ್ನು ಮೋರಿಯಿಂದ ಹೊರತೆಗೆದು ಅಲ್ಲೇ ಸಮೀಪ ಅಂತ್ಯಸಂಸ್ಕಾರ ಮಾಡಿದರು.

ಕರು ಸತ್ತು ಮೂರು ದಿನಗಳಾಗಿರಬಹುದು ಎಂದು ಹೇಳಲಾಗುತ್ತಿದ್ದು, ಕರು ಆಕಸ್ಮಿಕವಾಗಿ ಸತ್ತಿಲ್ಲ. ಉದ್ದೇಶಪೂರಿತವಾಗಿಯೇ ಸತ್ತ ದನದ ಕರುವನ್ನು ಕಿಡಿಗೇಡಿಗಳು ಎಸೆದಿರುವ ಬಗ್ಗೆ ಸಂಕೆ ವ್ಯಕ್ತವಾಗಿದೆ ಸಾರ್ವಜನಿಕರಲ್ಲಿ. ಮೋರಿಯ ಸಮೀಪ ಗಾಡಿಯೊಂದು ನಿಂತ ಕುರುಹುಗಳು ಕಂಡುಬಂದಿದ್ದು.
ಈ ಭಾಗದಲ್ಲಿ ದನಗಳ ಕಳವು ಆಗಾಗ ನಡೆಯುತ್ತಿದ್ದು, ಕರು ಸತ್ತು ಬಿದ್ದಿದ್ದ ಪ್ರದೇಶಕ್ಕೆ ಸಮೀಪದಲ್ಲೇ ಅಕ್ರಮ ಕಸಾಯಿಖಾನೆಯೊಂದಿದ್ದು, ಅಲ್ಲಿಗೆ ತಂದಿರುವ ಕರು ಸತ್ತಿರುವ ಕಾರಣ ಮೋರಿಯಲ್ಲಿ ಬಿಸಾಡಿರಬಹುದೇ ಎಂದು ಚರ್ಚೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!