Saturday, June 28, 2025
spot_imgspot_img
spot_imgspot_img

ಕುಂದಾಪುರ: ಗಂಡ ಹೆಂಡತಿ ಜಗಳ- ಛಾಯಾಗ್ರಾಹಕ ಪತಿ ಹೊಳೆಗೆ ಹಾರಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ :ಗಂಡ ಹೆಂಡತಿ ಪರಸ್ಪರ ಜಗಳವಾಡಿಕೊಂಡ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ಬಳಿಕ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ನಡೆದಿದೆ.

ಕಾಳಾವರ ಗ್ರಾಮದ ಅಂಗನವಾಡಿ ಸಮೀಪದ ನಿವಾಸಿ ಹರೀಶ್ ಬೋವಿ(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಹರೀಶ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದು, ಪ್ರೀತಿಸಿ ಮದುವೆಯಾಗಿದ್ದರು, ಇತ್ತೀಚೆಗೆ ಆಗಾಗ ಮನೆಯಲ್ಲಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದರೆನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಜಗಳವು ಅತೀಯಾಗಿ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಹೆದರಿದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಮನವರಿಕೆ ಮಾಡಿ ಆಟೋದಲ್ಲಿ ಕಳಿಸಿದ್ದರು. ಠಾಣೆಯಿಂದ ಹಿಂತಿರುಗುತ್ತಿದ್ದ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ.

ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು, ಪೊಲೀಸರು, ಅಗ್ನಿಶಾಮಕದಳ, ಮುಳುಗುತಜ್ಞರು ಹರೀಶ್ ಪತ್ತೆಗೆ ಶೋಧಕಾರ್ಯದಲ್ಲಿ ತೊಡಗಿದರು. ಆದರೆ ವಿಪರೀತ ಮಳೆ, ಉಕ್ಕಿ ಹರಿಯುತ್ತಿರುವ ನದಿ ನೀರಿನಲ್ಲಿ ಪತ್ತೆ ಕಾರ್ಯ ಸಫಲವಾಗಿಲ್ಲ. ಹರೀಶ್ ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಹಿರಿಮಗಳು ಮೂರನೇ ತರಗತಿ ಹಾಗೂ ಕಿರಿಯವಳು ಅಂಗನವಾಡಿಗೆ ಹೋಗುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಂಡ್ಲೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!