- Advertisement -
- Advertisement -



ಕುಂದಾಪುರ : ಕಂಡ್ಲೂರು ಸಮೀಪದ ಸೇತುವೆಯಿಂದ ಎರಡು ದಿನಗಳ ಹಿಂದೆ ವಾರಾಹಿ ನದಿಗೆ ಹಾರಿ, ನೀರಲ್ಲಿ ಕೊಚ್ಚಿಕೊಂಡು ಹೋಗಿದ್ದ ಹರೀಶ್ ಕಾಳಾವರ ಅವರ ಮೃತದೇಹವನ್ನು ಇಂದು ಅಪರಾಹ್ನ 2:30 ರ ವೇಳೆ ಕುಂದಾಪುರ ಸಂಗಮದ ಸಮೀಪ ನದಿ ತೀರದಲ್ಲಿ ಪತ್ತೆ ಹಚ್ಚಲಾಗಿದೆ.
ಕಳೆದ ಎರಡು ದಿನಗಳಿಂದ ಹರೀಶ್ ಪತ್ತೆಗಾಗಿ ಕಂಡ್ಲೂರು ಠಾಣಾ ಎಸ್ಐ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಹುಡುಕಾಟ ಕಾರ್ಯಾಚರಣೆ ನಡೆಸಿದ್ದರು.
ಕುಂದಾಪುರದ ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳೀಯ ಶೌರ್ಯ ತಂಡದ ಸದಸ್ಯರು, ಕಾಳಾವರದ ತಂಡ, ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಎರಡು ದಿನಗಳಿಂದ ಮೃತದೇಹ ಹುಡುಕಾಟದ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಕಂಡ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -