- Advertisement -
- Advertisement -



ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನದಿಂದ ಮಾರನಹಳ್ಳಿ ವರೆಗಿನ ಶಿರಾಡಿಘಾಟ್ ರಸ್ತೆಯು ದಿನಾಂಕ:18/07/2024 ರಿಂದ ರಸ್ತೆ ದುರಸ್ತಿ ಕಾರ್ಯ ಮುಗಿಯುವವರೆಗೆ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ಬೆಳಗ್ಗೆ 6:00 ರಿಂದ ಸಂಜೆ 6:00 ರವರೆಗೆ (ಅಂಬುಲೆನ್ಸ್ ಮತ್ತು ಅಗ್ನಿ ಶಾಮಕ ವಾಹನಗಳು ಹೊರತುಪಡಿಸಿ) ನಿಷೇಧಿಸಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಸಿ, ಭಾ.ಆ.ಸೇ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಮುಖಾಂತರ ಬೆಂಗಳೂರಿನಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಹಾಸನ-ಬೇಲೂರು-ಮೂಡಗೆರೆ ಚಾರ್ಮುಡಿ ಘಾಟ್ ಮಾರ್ಗವನ್ನು ಬಳಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


- Advertisement -