- Advertisement -
- Advertisement -




ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಪೋಶೆಟ್ಟಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ತಿನಕಲ್ಲು ಗ್ರಾಮದ ನರಸಿಂಹಮೂರ್ತಿ (45) ಎಂದು ಗುರುತಿಸಲಾಗಿದೆ.
ನರಸಿಂಹಮೂರ್ತಿ ರಸ್ತೆ ಬದಿ ಅಂಗಡಿ ಬಳಿ ನಿಂತಿದ್ದ ವೇಳೆ ಮಹಿಂದ್ರಾ ಮಿನಿ ಗೂಡ್ಸ್ ಏಕಾಏಕಿ ಬಂದು ಅಂಗಡಿಗೆ ನುಗ್ಗಿದೆ. ವಾಹನ ಗುದ್ದಿದ ರಭಸಕ್ಕೆ ನರಸಿಂಹಮೂರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ಮಹಿಂದ್ರಾ ಮಿನಿ ಗೂಡ್ಸ್ ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತದ ನಂತರ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -