- Advertisement -
- Advertisement -




ಮೈಸೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು ಚೌಥಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಭಾಗ್ಯವತಿ (32) ಎಂದು ಗುರುತಿಸಲಾಗಿದೆ.
5 ವರ್ಷದ ಹಿಂದೆ ಅಪಘಾತದಲ್ಲಿ ಭಾಗ್ಯವತಿ ಪತಿ ಮೃತಪಟ್ಟಿದ್ದರು. ಇತ್ತೀಚೆಗೆ ಭಾಗ್ಯವತಿ ಅವರಿಗೆ ಪತಿಯ ವಿಮೆ ಹಣ ಬಂದಿತ್ತು. ಆದರೆ ಈಗ ಇದೇ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ವಿಮೆ ಹಣ, ಚಿನ್ನಾಭರಣ ಕಳ್ಳತನವಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ಅನುಮಾನಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- Advertisement -