


ಆಂಧ್ರಪ್ರದೇಶದ ಡಿಸಿಎಂ ಆಗಿರುವ ಪವನ್ ಕಲ್ಯಾಣ್ ಹತ್ಯೆಗೆ ಷಡ್ಯಂತ್ರಗಳು ನಡೆಯುತ್ತಿವೆ ಎಂದು ಕೇಂದ್ರ ಮೂಲಗಳು ಬಹಿರಂಗಪಡಿಸಿವೆ. ಇದರಿಂದ ಜನಸೇನಾ ಕಾರ್ಯಕರ್ತರ ಜತೆಗೆ ಅಭಿಮಾನಿಗಳಲ್ಲೂ ಆತಂಕ ಶುರುವಾಗಿದೆ.
ಈಗ ಪೂರ್ಣಾವಧಿ ರಾಜಕೀಯದಲ್ಲಿ ಬ್ಯುಸಿ ಆಗಿರುವ ಪವನ್ ಕಲ್ಯಾಣ್ ಹತ್ತಾರು ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾರ್ವಜನಿಕವಾಗಿ ಸುತ್ತಾಡುವಾಗ ಅವರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ. . ಕೇಂದ್ರ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪವನ್ ಕಲ್ಯಾಣ್ ಅವರಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.
ಜನಸೇನಾ ಪಕ್ಷದ ಮೂಲಕ ಪವನ್ ಕಲ್ಯಾಣ್ ಅವರಿಗೆ ಈ ವರ್ಷ ದೊಡ್ಡ ಗೆಲುವು ಸಿಕ್ಕಿತು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷ ಜಯಭೇರಿ ಬಾರಿಸಿತು. ಸಿನಿಮಾರಂಗದಲ್ಲೂ ಪವನ್ ಕಲ್ಯಾಣ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇದೆಲ್ಲದರ ನಡುವೆ ಅವರ ಹತ್ಯೆಗೆ ಕೆಲವರು ಸ್ಕೆಚ್ ಹಾಕುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಈ ಬಗ್ಗೆ ಪವನ್ ಕಲ್ಯಾಣ್ ಅವರು ಗಮನ ಹರಿಸುವ ಅಗತ್ಯ ಇದೆ.
ಕಿಡಿಗೇಡಿಗಳು ಪವನ್ ಕಲ್ಯಾಣ್ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ಕಾರಣದಿಂದ ಪೊಲೀಸರು ಭದ್ರತೆ ಹೆಚ್ಚಿಸಬೇಕು ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿಯನ್ನು ಜನಸೇನಾ ಪಕ್ಷದ ಮೂಲಗಳು ಖಚಿತಪಡಿಸಿವೆ ಎಂದು ವರದಿ ಆಗಿದೆ. ಅಷ್ಟಕ್ಕೂ ಪವನ್ ಕಲ್ಯಾಣ್ ಅವರನ್ನು ಮುಗಿಸಲು ಯತ್ನಿಸುತ್ತಿರುವವರು ಯಾರು ಎಂಬುದು ಸದ್ಯಕ್ಕೆ ಬಹಿರಂಗ ಆಗಿಲ್ಲ.
ತಮ್ಮ ಪ್ರಾಣಕ್ಕೆ ಅಪಾಯ ಇರುವ ಬಗ್ಗೆ ಈ ಮೊದಲು ಸ್ವತಃ ಪವನ್ ಕಲ್ಯಾಣ್ ಅವರು ಹೇಳಿದ್ದರು. ಈಗ ಗುಪ್ತಚರ ಇಲಾಖೆಗೂ ಈ ಬಗ್ಗೆ ಮಾಹಿತಿ ಸಿಕ್ಕಿರುವುದರಿಂದ ಪವನ್ ಕಲ್ಯಾಣ್ ಅವರಿಗೆ ಝಡ್ ಪ್ಲಸ್ ಸೆಕ್ಯೂರಿಟಿ ನೀಡಬೇಕು ಎಂದು ಜನಸೇನಾ ಪಕ್ಷದವರು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಪವನ್ ಕಲ್ಯಾನ್ ಅವರ ಏಳಿಗೆಯನ್ನು ಸಹಿಸದವರು ಈ ರೀತಿ ಸಂಚು ರೂಪಿಸಿರಬಹುದು.