Sunday, June 29, 2025
spot_imgspot_img
spot_imgspot_img

ಪುತ್ತೂರು: ಪಂಚರ್ ಆಗಿದ್ದ ಲಾರಿ ಟಯರ್ ಜೋಡಿಸುವ ವೇಳೆ ಸ್ಫೋಟ : ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕ ಗಂಭೀರ

- Advertisement -
- Advertisement -

ಪುತ್ತೂರು: ಪಂಚರ್ ಆಗಿದ್ದ ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಗಂಭೀರ ಗಾಯಗೊಂಡ ಕಾರ್ಮಿಕನನ್ನು ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ.

ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯ‌ರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ರಶೀದ್ ನನ್ನು ಕರೆದುಕೊಂಡು ಬಂದಿದ್ದರು ಎನ್ನಲಾಗಿದೆ.
ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!