Saturday, June 28, 2025
spot_imgspot_img
spot_imgspot_img

ಶಿರೂರು ಗುಡ್ಡ ಕುಸಿತ ಪ್ರಕರಣ : ಕೇರಳ ಮೂಲದ ಲಾರಿ ಚಾಲಕನ ಕುಟುಂಬ ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು,ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. ಹನ್ನೊಂದು ಜನರ ಪೈಕಿ 8 ಜನರ ಮೃತದೇಹ ಪತ್ತೆ ಆಗಿದ್ದು 4 ಜನರ ಶವ ಪತ್ತೆಯಾಗಬೇಕಿದೆ. ಈ ಮಧ್ಯೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು ಅರ್ಜಿ ಸಲ್ಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಲಾರಿಯ ಜಿಪಿಆರ್​ಎಸ್​ ಕೊನೆಯ ಲೊಕೇಶನ್ ಪತ್ತೆ ಹಿನ್ನೆಲೆ ಕಾರ್ಯಾಚರಣೆ ಅವೈಜ್ಞಾನಿಕವಾಗಿ, ವಿಳಂಬವಾಗಿ ನಡೀತಿದೆ ಎಂದು ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಆರೋಪಿಸಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ವರದಿ ಕೇಳಿದ್ದು,​ ನಾಳೆ ಈ ಪ್ರಕರಣ ಸಂಬಂಧ ವಿಚಾರಣೆ ನಡೆಯಲಿದೆ.

ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ರಾಡಾರ್ ಮೂಲಕ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್​ಗಳು ಇರುವುದು ಪತ್ತೆಯಾಗಿಲ್ಲ.

ಈ ಕಾರಣದಿಂದ ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸುತಿದ್ದು ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ ಎನ್​​ಡಿಆರ್​ಎಫ್​, ಎಸ್​ಡಿಆರ್​ಎಫ್​ ಹಾಗೂ ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!