Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ : ನಗದು ಸಹಿತ ಆರೋಪಿಗಳು ಪೊಲೀಸ್‌ ವಶ

- Advertisement -
- Advertisement -

ಬಂಟ್ವಾಳ: ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ನಗದು ಸಹಿತ ಆರೋಪಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದ್ದು, ಓರ್ವ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್‌ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದ್ದು, ಜಜಯಣ್ಣ @ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ.

ಆರೋಪಿ ಜಯಚಂದ್ರ ಬೊಳ್ಳಾರ್ ಎಂಬಾತನ ಒಡೆತನದ ಪಿಲಿಮೊಗರು ಗ್ರಾಮದ ನಡಾಯಿ ಎಂಬಲ್ಲಿರುವ ಮನೆಯೊಳಗೆ ಇಸ್ಪೀಟ್ ಎಲೆಗಳನ್ನು ಬಳಸಿ ಅಕ್ರಮವಾಗಿ ಈ ಜುಗಾರಿ ಅಡ್ಡೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ಇನ್ಸ್ ಪೆಕ್ಟ‌ರ್ ಶಿವಕುಮಾ‌ರ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿ ವೇಳೆ ಸ್ಥಳದಲ್ಲಿ ದೊರೆತ 28,120/- ರೂಪಾಯಿ ನಗದು ಸಹಿತ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!