Saturday, June 28, 2025
spot_imgspot_img
spot_imgspot_img

ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

- Advertisement -
- Advertisement -

ಮಂಗಳೂರು : ಸಕಲೇಶಪುರದ ಎಡಕುಮೇರಿ ಮತ್ತು ಕಡಗರಳ್ಳಿ ನಡುವಿನ ದೋಣಿಗಲ್‌ನಲ್ಲಿ ಭೂಕುಸಿತದಿಂದ ಸ್ಥಗಿತಗೊಂಡಿರುವ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಗುರುವಾರದಿಂದ ಪುನರಾರಂಭಗೊಂಡಿದೆ.

ಜು. 26ರಂದು ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂ ಕುಸಿತ ಸಂಭವಿಸಿತ್ತು. ಪರಿಣಾಮ ತತ್‌ಕ್ಷಣ ದಿಂದಲೇ ಮಂಗಳೂರು- ಬೆಂಗಳೂರು ನಡುವಣ ಎಲ್ಲ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿತ್ತು. ಇದೀಗ ಭೂಕುಸಿತ ಸಂಭವಿಸಿದ ಪ್ರದೇಶದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇದೀಗ 12 ದಿನಗಳ ಬಳಿಕ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.

- Advertisement -

Related news

error: Content is protected !!