ಆರೋಪಿ ಕಾಮುಕ ಅಶ್ರಫ್ ನನ್ನು ತಕ್ಷಣ ಬಂಧಿಸುವಂತೆ ಹಿಂ. ಜಾ. ವೇ. ಜಿಲ್ಲಾ ಸಂಯೋಜಕ್ ನರಸಿಂಹ ಮಾಣಿ ಆಗ್ರಹ


ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.
ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ ವೇಳೆ ಅಂಗಡಿಯ ಮಾಲಕ ಅಶ್ರಫ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತ ತನ್ನ ಅಂಗಡಿಯಲ್ಲಿ ಈ ಹಿಂದೆ 3 ಹೆಣ್ಣು ಮಕ್ಕಳಿಗೆ ದೌರ್ಜನ್ಯ ನಡೆಸಿದ್ದ, ಇದರ ಸಿಸಿ ಟಿವಿ ಫೂಟೇಜ್ ಪೊಲೀಸರಿಗೆ ಲಭಿಸಿದ್ದು ಈ ಎಲ್ಲಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ತಕ್ಷಣ ಬಂಧಿಸಿ ಹಿಂದಿನ ಪ್ರಕರಣವನ್ನು ಕೂಡ ಎಫ್ಐಆರ್ ದಾಖಲಿಸುವಂತೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಯೋಜಕ ನರಸಿಂಹ ಮಾಣಿ ಆಗ್ರಹಿಸಿದ್ದಾರೆ.