Sunday, June 29, 2025
spot_imgspot_img
spot_imgspot_img

ಉಡುಪಿ: ಪಿಕಪ್ ಮತ್ತು ಅಟೋರಿಕ್ಷಾ ನಡುವೆ ಅಪಘಾತ ; ಗಾಯಾಳು ಟೂರಿಸ್ಟ್ ಬಸ್ ಮೂಲಕ ಆಸ್ಪತ್ರೆಗೆ ದಾಖಲು

- Advertisement -
- Advertisement -

ಉಡುಪಿ : ಗ್ಯಾಸ್ ಸಿಲಿಂಡರ್ ತುಂಬಿದ್ದ ಮಹೀಂದ್ರಾ ಪಿಕಪ್ ಮತ್ತು ಅಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ಅಟೋರಿಕ್ಷಾ ಚಾಲಕನ ತಲೆ ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯವಾದ ಘಟನೆ ಉಡುಪಿಯ ಸಂತೆಕಟ್ಟೆ ಸಮೀಪದ ಆಶೀರ್ವಾದ ಜಂಕ್ಷನ್ ಬಳಿ ನಡೆದಿದೆ.

ಈ ಘಟನೆ ನಡೆದು ಸುಮಾರು ಸಮಯ ಕಳೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಯಾರೂ ಮುಂದೆ ಬಂದಿಲ್ಲ. ಅದೇ ದಾರಿಯಾಗಿ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಮಲ್ಪೆಯ ಬ್ರದರ್ಸ್ ಟೂರಿಸ್ಟ್ ಬಸ್ಸು ಚಾಲಕ ಬುರ್ಹಾನ್ ಮಲ್ಪೆ ಹಾಗೂ ನವೀನ್ ಹನುಮಾನ್ ನಗರ ಬಸ್ಸನ್ನು ನಿಲ್ಲಿಸಿ ವಿಚಾರಿಸಿದ್ದಾರೆ.

ಪ್ರಜ್ಞಾಹೀನನಾಗಿ, ರಕ್ತಸಿಕ್ತನಾಗಿ ಬಿದ್ದಿದ್ದ ಗಾಯಾಳುವನ್ನು ಕಂಡು ಗಾಬರಿಗೊಂಡು ತಕ್ಷಣ ತಮ್ಮ ಟೂರಿಸ್ಟ್ ಬಸ್ ನ ಮುಖಾಂತರ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಒಳಗಡೆ ಬಸ್ಸನ್ನೇ ಕೊಂಡುಹೋಗಿ ಗಾಯಾಳುವನ್ನು ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇನ್ನು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಈಶ್ವರ್ ಮಲ್ಪೆ ಮತ್ತು ತಂಡ ಸಹಕರಿಸಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!