ಹಿಂ. ಜಾ.ವೇದಿಕೆಯ ಹೋರಾಟಕ್ಕೆ ಸಂದ ಜಯ; 48 ಗಂಟೆಯೊಳಗೆ ಆರೋಪಿಯ ಬಂಧನ




ವಿಟ್ಲ : ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈದೀಗ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ 40 ವರ್ಷ ಪ್ರಾಯದ ಅಶ್ರಫ್ ಎಂಬಾತ ತನ್ನ ಅಂಗಡಿಯಲ್ಲಿ ಈ ಹಿಂದೆ 3 ಹೆಣ್ಣು ಮಕ್ಕಳಿಗೆ ದೌರ್ಜನ್ಯ ನಡೆಸಿದ್ದ, ಇದರ ಸಿಸಿ ಟಿವಿ ಫೂಟೇಜ್ ಪೊಲೀಸರಿಗೆ ಲಭಿಸಿದ್ದು ಈ ಎಲ್ಲಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ತಕ್ಷಣ ಬಂಧಿಸಿ ಹಿಂದಿನ ಪ್ರಕರಣವನ್ನು ಕೂಡ ಎಫ್ಐಆರ್ ದಾಖಲಿಸಿ, ಆರೋಪಿಗಳನ್ನು 48 ಗಂಟೆಗಳ ಒಳಗೆ ಬಂಧಿಸಬೇಕು ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಆಗ್ರಹಿಸಿದ್ದರು. ಪೊಲೀಸರು 48 ಗಂಟೆಯೊಳಗೆ ಅಶ್ರಫ್ ನನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ ಆನೆಕಲ್ಲು ಗುವೆದಪಡ್ಪು ಸಮೀಪ ಆರೋಪಿ ಅಶ್ರಫ್ನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರ ಕಾರ್ಯವೈಖರಿಗೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ.