Saturday, June 28, 2025
spot_imgspot_img
spot_imgspot_img

ಮಂಗಳೂರು; ’ನಾನು ತಿಳಿಯದೇ ತಪ್ಪು ಮಾಡಿದ್ದೇನೆ, ಇದಕ್ಕಾಗಿ ನನ್ನನ್ನು ಕ್ಷಮಿಸಿ’: ದೈವಾರಾಧನೆಗೆ ಅಪಚಾರ ಎಸಗಿದ ಮಹಿಳೆಯಿಂದ ಕದ್ರಿ ದೇವಸ್ಥಾನದಲ್ಲಿ ಕ್ಷಮೆಯಾಚನೆ

- Advertisement -
- Advertisement -

ಮಂಗಳೂರು; ಮಂಗಳೂರಿನ ಯೆಯ್ಯಾಡಿ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳೆಯೊಬ್ಬರು ದೈವ ನರ್ತನದಂತೆ ಕುಣಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಕಾರ್ಯಕ್ರಮದಲ್ಲಿ ತುಳು ಹಾಡಿಗೆ ಮಹಿಳೆ ದೈವನರ್ತನದಂತೆ ಕುಣಿದಿದ್ದು, ಕಾರ್ಯಕ್ರಮದಲ್ಲಿ ಸೇರಿದ್ದ ಹಲವರಿಂದ ಚಪ್ಪಾಳೆ ತಟ್ಟಿ ಮಹಿಳೆಗೆ ಪ್ರೋತ್ಸಾಹವನ್ನೂ ನೀಡಲಾಗಿತ್ತು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆಯೇ ದೈವಾರಾಧಕರು ಮತ್ತು ಹಿಂದೂ ಸಂಘಟನೆಗಳು ಸೇರಿದಂತೆ ತುಳುನಾಡಿನಲ್ಲಿ ದೊಡ್ಡ ಮಟ್ಟದ ವಿರೋಧ ವ್ಯಕ್ತಪಡಿಸಿದ್ದರು. ಮಂಗಳೂರು ಮಾತ್ರವಲ್ಲದೆ, ಇಡೀ ಕರಾವಳಿಯಲ್ಲಿ ಈ ವಿಡಿಯೋ ವ್ಯಾಪಕವಾಗಿ ಚರ್ಚೆಯಾಗಿತ್ತು. ಕಾರ್ಯಕ್ರಮ ಆಯೋಜಕರನ್ನು ಕರೆ ಮಾಡಿ ಜನರು ತರಾಟೆಗೆ ತೆಗೆದುಕೊಂಡಿದ್ದರು. ಮಹಿಳೆ ದೈವದ ಎದುರು ನಿಂತು ಕ್ಷಮೆ ಯಾಚಿಸುವಂತೆ ಆಗ್ರಹ ಮಾಡಲಾಗಿತ್ತು.

ಇದೀಗ ಈ ಮಹಿಳೆ ಬುಧವಾರ ಕದ್ರಿ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಆಗಮಿಸಿ ಮಂಡಿಯೂರಿ ಕ್ಷಮೆ ಯಾಚಿಸಿದ್ದಾರೆ. ಅದರೊಂದಿಗೆ ದೇವರಿಗೆ ತಪ್ಪು ಕಾಣಿಕೆಯನ್ನೂ ಕೂಡ ಸಲ್ಲಿಕೆ ಮಾಡಿದ್ದಾರೆ. ದೇವರ ಸನ್ನಿಧಿಯಲ್ಲಿ ತಪ್ಪಾಯ್ತು ಅಂತ ಗಳಗಳನೆ ಅತ್ತ ಈ ಮಹಿಳೆ ನಾನು ತಿಳಿಯದೇ ತಪ್ಪು ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿ ಎಂದು ದೇವರ ಎದುರು ಕ್ಷಮೆಯಾಚನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ದಯಾನಂದ ಕತ್ತಲ್ ಸಾರ್ ಮಹಿಳೆಗೆ ಬುದ್ಧಿಮಾತು ಹೇಳಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!