Sunday, June 29, 2025
spot_imgspot_img
spot_imgspot_img

ಇಂದು ಕರ್ನಾಟಕದಾದ್ಯಂತ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್

- Advertisement -
- Advertisement -

ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು(ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ನೀಡಿದೆ.

ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್​​​ಗಳು ಬೆಂಬಲ ಕೊಟ್ಟಿದ್ದು, ಇಂದು(ಶನಿವಾರ) ಕರ್ನಾಟಕದಲ್ಲಿ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಸೇವೆ ಸ್ಥಗಿತವಾಗಲಿದೆ.

ಇದರಿಂದ ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ.ಜ್ವರ, ಶೀತ, ಕೆಮ್ಮು ಎಂದು ಹೋದರೆ ಕ್ಲಿನಿಕ್ ಸೇವೆಯೂ ಸಿಗುವುದಿಲ್ಲ. ಬೆಂಗಳೂರಿನಲ್ಲಿ ಇರುವ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಪ್ರತಿಭಟನೆ ಜೋರಾಗಿದೆ. ಸರ್ಕಾರಿ ವೈದ್ಯರು ಕಪ್ಪುಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ. ಇದರ ಜೊತೆ ಖಾಸಗಿ ವೈದ್ಯರು ಐಎಂಎ ಸಂಘದ ಎದುರು ಹೋರಾಟ ನಡೆಸಲು ಸಜ್ಜಾಗಿದ್ದಾರೆ.

ಹೀಗಾಗಿ ಶನಿವಾರ(ಆಗಸ್ಟ್ 17) ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ರವರೆಗೆ, ಓಪಿಡಿ ಸೇವೆ ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ರೋಗಿಗಳು ಆಸ್ಪತ್ರೆಗೆ ಹೋದರೆ ಚಿಕಿತ್ಸೆ ಸಿಗಲ್ಲ, ಎಮರ್ಜೆನ್ಸಿ ಪೇಷೆಂಟ್ ಗೆ ಮಾತ್ರ ಚಿಕಿತ್ಸೆ ನೀಡಲಿದ್ದಾರೆ.‌ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು. ಆಸ್ಪತ್ರೆಗಳನ್ನು ಸೇಫ್ ಝೋನ್ ಎಂದು ಘೋಷಿಸಲು IMA ಆಗ್ರಹಿಸಿದೆ.

ಒಟ್ಟಿನಲ್ಲಿ ಇಂದು ಕೊಲ್ಕತ್ತಾ ವೈದ್ಯೆಯ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಮತ್ತು ರಾಜಧಾನಿಯ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದ್ದು ಸಾರ್ವಜನಿಕರು ಎಚ್ಚರವಹಿಸಬೇಕಿದೆ.‌

ಇನ್ನೂ ವೈದ್ಯರ ಪ್ರತಿಭಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಪರೋಕ್ಷವಾಗಿ ಬೆಂಬಲಿಸಿದ್ದಾರೆ. ಪ್ರತಿಭಟನೆ ಉದ್ದೇಶ ಸರಿ ಇದೆ‌. ಅವರ ಹಕ್ಕನ್ನ ಅವರು ವ್ಯಕ್ತಪಡಿಸಲಿ. ಸಾರ್ವಜನಿಕರಿಗೆ ತೊಂದರೆ ಆಗದೇ ರೀತಿ ಪ್ರತಿಭಟನೆ ಮಾಡಲಿ ಎಂದಿದ್ದಾರೆ.

- Advertisement -

Related news

error: Content is protected !!