- Advertisement -
- Advertisement -



ಪುತ್ತೂರು: ಬೈಕ್ ಹಾಗೂ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಕಾವು ಸಮೀಪ ನಡೆದಿದೆ.
ಮೃತಪಟ್ಟವರನ್ನು ಅಮ್ಮಿನಡ್ಕದಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿರುವ ಮಾಡೂರು ಗ್ರಾಮದ ಕಾವು ಬಜಿಕುಡೇಲು ದಿ. ರಾಮ ಭಂಡಾರಿ ಎಂಬವರ ಪುತ್ರ ಅವಿವಾಹಿತ ಸುರೇಶ್ ಭಂಡಾರಿ (45) ಎಂದು ಗುರುತಿಸಲಾಗಿದೆ.
ಸುರೇಶ್ ಭಂಡಾರಿ ಇಂದು ಬೆಳಗ್ಗೆ ಬೈಕ್ನಲ್ಲಿ ಅಮ್ಮಿನಡ್ಕದ ಸೆಲೂನ್ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಕಾವಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬರುತ್ತಿದ್ದ ಪಿಕಪ್ ನಡುವೆ ಅಪಾಘತ ಸಂಭವಿಸಿದೆ ಎನ್ನಲಾಗಿದೆ.
- Advertisement -