- Advertisement -
- Advertisement -



ದೇರಳಕಟ್ಟೆ: ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ (31) ಎಂದು ಗುರುತಿಸಲಾಗಿದೆ.
ಕೊಣಾಜೆ ಪೊಲೀಸ್ ಠಾಣಾ ವಾರೆಂಟ್ ಆರೋಪಿ ಆಗಿದ್ದ ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ ಆಗಿದ್ವು, ಈತನ ವಿರುದ್ಧ ಕೊಣಾಜೆ ಠಾಣೆ, ಉಳ್ಳಾಲ ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ ಪ್ರಕರಣದಲ್ಲಿ ಈತನು ಸುಮಾರು 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -