Friday, June 27, 2025
spot_imgspot_img
spot_imgspot_img

ಮಂಗಳೂರು: ಖೋಟಾ ನೋಟು ಚಲಾವಣೆ : 4 ಮಂದಿ ಸಿಸಿಬಿ ಬಲೆಗೆ

- Advertisement -
- Advertisement -

ಮಂಗಳೂರು: ಕೇರಳದಲ್ಲಿ ಖೋಟಾ ನೋಟು ಮುದ್ರಿಸಿ ಕರ್ನಾಟಕಕ್ಕೆ ಸರಬರಾಜು ಮಾಡುತ್ತಿದ್ದ 4ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂದಿತರನ್ನು ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ವಿ. ಪ್ರಿಯೇಶ್ (38), ಅಬ್ದುಲ್ ಖಾದರ್ (58). ವಿನೋದ್ ಕುಮಾರ್
(33), ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಅಯೂಬ್ ಖಾನ್(51) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟು ಚಲಾವಣೆ ಜಾಲದಲ್ಲಿ ಭಾಗಿಯಾಗಿದ್ದ ಆರೋಪಿಗಳ ಸಹಿತ 2,13,500 ಮೌಲ್ಯದ 500 ರೂ. ಮುಖಬೆಲೆಯ 427 ಖೋಟಾ ನೋಟುಗಳು, ಹಾಗೂ 4 ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಆರೋಪಿಗಳ ಪೈಕಿ ಪ್ರಿಯೇಶ್ ಎಂಬಾತನು ಕಾಸರಗೋಡು ಜಿಲ್ಲೆಯ ಚೆರ್ಕಳ ಎಂಬಲ್ಲಿ ಪ್ರಿಂಟಿಂಗ್ ಪ್ರೆಸ್ ನ್ನು ಹೊಂದಿದ್ದು, ಈ ಪ್ರಿಂಟಿಂಗ್ ಪ್ರೆಸ್ ನಲ್ಲಿ ಈ ಖೋಟಾ ನೋಟುಗಳನ್ನು ತಯಾರಿಸುತ್ತಿದ್ದನು. ಈ ಖೋಟಾ ನೋಟುಗಳನ್ನು ತಯಾರಿಸಲು ಬೇಕಾದ ಕಚ್ಚಾ ಸಾಮಾಗ್ರಿಗಳನ್ನು ಕೇರಳದ ಕೋಝೀಕೋಡ್ ಮತ್ತು ದೆಹಲಿಯಿಂದ ಖರೀದಿಸಿಕೊಂಡು ಈ ಖೋಟಾ ನೋಟುಗಳನ್ನು ತಯಾರಿಸುವ ವಿಧಾನವನ್ನು ಯೂಟ್ಯೂಬ್ ಮೂಲಕ ವೀಕ್ಷಿಸಿ ಸುಲಭವಾಗಿ ಹಣವನ್ನು ಸಂಪಾದನೆ ಮಾಡುವ ಉದ್ದೇಶದಿಂದ ಈ ಕೃತ್ಯವನ್ನು ಎಸಗಿರುವುದಾಗಿದೆ.

ಆರೋಪಿಗಳು ಈ ಖೋಟಾ ನೋಟುಗಳನ್ನು ಕೇರಳದಿಂದ ತಯಾರಿಸಿಕೊಂಡು ತಂದು ಮಂಗಳೂರು ನಗರದಲ್ಲಿ ಚಲಾವಣೆ ಮಾಡಲು ಯತ್ನಿಸುತ್ತಿದ್ದರು. ಈ ಖೋಟಾ ನೋಟು ಚಲಾವಣೆ ಜಾಲದಲ್ಲಿ ಹಲವಾರು ಮಂದಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ತನಿಖೆ ಕೈಗೊಳ್ಳಲಾಗುತ್ತಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳಾದ 500 ರೂಪಾಯಿ ಮುಖಬೆಲೆಯ 427 ಖೋಟಾ ನೋಟುಗಳು. (ಅಂದಾಜು ಮೌಲ್ಯ-2,13,500/) ನಗದು ಹಣ-9,030ರೂ, ಮೊಬೈಲ್ ಪೋನ್ -2 ( 30,000)ಮೊಬೈಲ್ ಪೋನ್ -1 (1,000/-) ಮೊಬೈಲ್ ಪೋನ್ -1 (10,000/-) ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಸುದೀಪ್ , ಎಎಸ್ಐ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಭಾಗವಹಿಸಿದ್ದಾರೆ.

- Advertisement -

Related news

error: Content is protected !!