- Advertisement -
- Advertisement -


ಕಾಸರಗೋಡು: ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಸಹಿತ ಓರ್ವ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ನನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಸಮಯದಲ್ಲಿ ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಈತನು ಸಂಶಯಾಸ್ಪದಾಗಿ ನಿಂತುಕೊಂಡಿದ್ದು, ಈ ಸಂದರ್ಭಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
- Advertisement -