


ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ಹೊಸಬೆಟ್ಟುವಿನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಮಂಜೇಶ್ವರ ಹೊಸಬೆಟ್ಟುವಿನ ನಿವಾಸಿ ಯಶವಂತ (21) ಎಣದು ಗುರುತಿಸಲಾಗಿದೆ.
ಸಂಜೆ ಮನೆಯ ಟೆರೇಸ್ನಲ್ಲಿ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದ ಯಶವಂತ, ಮರದ ಹತ್ತಿರದಲ್ಲೇ ಹಾದು ಹೋಗಿದ್ದ ಹೈಟೆನ್ಷನ್ ತಂತಿಯಿಂದ ಶಾಕ್ ತಗುಲಿ ಅಲ್ಲೇ ಕುಸಿದು ಬಿದ್ದಿದ್ದಾನೆ. ಯಶವಂತ ಸುಮಾರು ಹೊತ್ತು ಕಳೆದರೂ ಮರಳಿ ಬಾರದದಿದ್ದುದರಿಂದ ಸಹೋದರಿ ಟೆರೇಸ್ಗೆ ಹತ್ತಿ ನೋಡಿದಾಗ ಯಶವಂತ ಬಿದ್ದಿರುವುದು ಕಂಡುಬಂದಿದೆ.
ಬಳಿಕ ಸ್ಥಳೀಯ ನಿವಾಸಿಗಳು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಯಶವಂತ ಅವರು ಮೃತ ಪಟ್ಟಿದ್ದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಶವಂತ ಉಪ್ಪಳ ಶಾಲಾ ಬಳಿಯ ಪೆಟ್ರೋಲ್ ಬಂಕ್ನಲ್ಲಿ ಎರಡು ವರ್ಷಗಳಿಂದ ಉದ್ಯೋಗ ಮಾಡುತ್ತಿದ್ದು, ಸಂಜೆ ಕೆಲಸಕ್ಕೆ ತೆರಳಲು ಸಿದ್ದತೆ ನಡೆಸುತ್ತಿದ್ದ. ಈ ನಡುವೆ ಟೆರೇಸ್ನ ಮೇಲೆ ಬಿದ್ದಿದ್ದ ಮಡಲನ್ನು ತೆಗೆಯಲು ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.