- Advertisement -
- Advertisement -



ಉಡುಪಿ: ನೇಣು ಬಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಅಜ್ಜರಕಾಡು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಜ್ಜರಕಾಡು ನಿವಾಸಿ ಸರಿಟ ವೇಗಸ್ ಹಾಗೂ ಮನೋಹರ್ ವೇಗಸ್ ದಂಪತಿ ಪುತ್ರ ತುಷಾರ್ ವೇಗಾಸ್ (17) ಎಂದು ಗುರುತಿಸಲಾಗಿದೆ.
ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ತುಷಾರ್, ಕಾಲೇಜಿನಿಂದ ಮನೆಗೆ ಬಂದು ರೂಮಿನಲ್ಲಿ ಮಲಗಿದ್ದು, ಈ ವೇಳೆ ತುಷಾರ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ತುಷಾರ್ ಯಾವುದೋ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
- Advertisement -