Saturday, June 28, 2025
spot_imgspot_img
spot_imgspot_img

ದೆಹಲಿ ಅಬಕಾರಿ ನೀತಿ ಪ್ರಕರಣ: ; ಬಿಆರ್‌ಎಸ್‌ ನಾಯಕಿ ಕವಿತಾ 5 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ

- Advertisement -
- Advertisement -

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್‌ನಿಂದ ಜೈಲಿನಲ್ಲಿದ್ದ ಕೆ. ಕವಿತಾ ಇಂದು ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ತೆಲಂಗಾಣದ ರಾಜಕಾರಣಿ ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ನಿನ್ನೆ ಸಂಜೆ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಎರಡೂ ಪ್ರಕರಣಗಳಲ್ಲಿ ತಲಾ 10 ಲಕ್ಷ ರೂ.ಗಳ ಬಾಂಡ್‌ಗಳನ್ನು ಒದಗಿಸುವ ಮೂಲಕ ಕವಿತಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ.

ಕವಿತಾ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಅವರ ವಿರುದ್ಧದ ತನಿಖೆ ಪೂರ್ಣಗೊಂಡಿದ್ದು, ಈಗಾಗಲೇ ಚಾರ್ಜ್ ಶೀಟ್ ಮತ್ತು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ವಾದಿಸಿದರು. ಎರಡು ಪ್ರಕರಣಗಳಲ್ಲಿ ಸಹ ಆರೋಪಿ ಮತ್ತು ಹಿರಿಯ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಜಾಮೀನು ಮಂಜೂರು ಮಾಡುವ ಆಗಸ್ಟ್ 9ರ ಸುಪ್ರೀಂ ಕೋರ್ಟ್ ತೀರ್ಪನ್ನು ಅವರು ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!