Saturday, June 28, 2025
spot_imgspot_img
spot_imgspot_img

ಕುಂದಾಪುರ : ಆರೋಗ್ಯ ವೀಕ್ಷಣಾಧಿಕಾರಿ ಆತ್ಮಹತ್ಯೆ

- Advertisement -
- Advertisement -

ಕುಂದಾಪುರ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ .

ಶಿವಮೊಗ್ಗ ಮೂಲದ ಪ್ರಶಾಂತ್ (37) ಆತ್ಮಹತ್ಯೆಗೆ ಶರಣಾದ ಆರೋಗ್ಯ ವೀಕ್ಷಣಾಧಿಕಾರಿ.

ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು.

ಆದರೆ ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದು, ಮಲಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಆತ ಯಾವುದೋ ವಿಷ ಪದಾರ್ಥ ಸೇವಿಸಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಶಾಂತ್ ವಿವಾಹಿತನಾಗಿದ್ದು ಒಂದು ಪುಟ್ಟ ಮಗುವಿದೆ ಎಂದು ತಿಳಿದುಬಂದಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!