- Advertisement -
- Advertisement -





ಕೆಎಸ್ಆರ್ಟಿಸಿ ಬಸ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಚಾಲಕ ಸಾವನ್ನಪ್ಪಿದ್ದು, 9 ಪ್ರಯಾಣಿಕರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಹರಾಪೂರ ಗ್ರಾಮದ ಬಳಿ ನಡೆದಿದೆ.
ಪುಂಡಲೀಕ್ (36) ಮೃತ ಖಾಸಗಿ ಬಸ್ ಚಾಲಕ. ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಕ್ಯಾಮರಾದಲ್ಲಿ ಸೆರೆ ಆಗಿದೆ. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಿಂದ ಯಾದಗಿರಿ ಕಡೆಗೆ ಕೆಎಸ್ಆರ್ಟಿಸಿ ಬಸ್ ಹೊರಟಿತ್ತು. ಬೆಂಗಳೂರಿನಿಂದ ಕಲಬುರಗಿಯತ್ತ ಖಾಸಗಿ ಬಸ್ ಹೊರಟಿತ್ತು. ಈ ಹರಾಪೂರ ಗ್ರಾಮದ ಬಳಿ ಡಿಕ್ಕಿ ಹೊಡೆದಿವೆ. ಗಾಯಾಳುಗಳಿಗೆ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Advertisement -