Saturday, June 28, 2025
spot_imgspot_img
spot_imgspot_img

ಕನ್ನಡತಿ ಸೀರಿಯಲ್‌ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!

- Advertisement -
- Advertisement -

ಬೆಂಗಳೂರು: ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಕಾರಿನ ಬಲಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಿರುತೆರೆಯಲ್ಲಿ ಕನ್ನಡತಿ ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದ ಕಿರಣ್ ರಾಜ್ ಅಭಿನಯದ ರಾನಿ ಸಿನಿಮಾ ಬಿಡುಗಡೆಗೆ ಒಂದು ದಿನ ಇರುವಾಗ ಅಪಘಾತ ಸಂಭವಿಸಿದೆ.

- Advertisement -

Related news

error: Content is protected !!