Saturday, June 28, 2025
spot_imgspot_img
spot_imgspot_img

ಉಡುಪಿ: ನೇಜಾರ್‌ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ

- Advertisement -
- Advertisement -

ಉಡುಪಿ: ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಅನ್ನ, ನೀರು ಸ್ವೀಕರಿಸಲು ನಿರಾಕರಸಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರು ಸೆಂಟ್ರಲ್ ಜೈಲ್ ನಲ್ಲಿ ಆರೋಪಿ ಪ್ರವೀಣ್ ಉಪವಾಸವಿದ್ದು, ಬೆಳಗಿನ ತಿಂಡಿ ಮಧ್ಯಾಹ್ನ ಊಟ ಮಾಡದೆ ಹಠ ಮಾಡುತ್ತಿದ್ದಾನೆ. ಇಷ್ಟಕ್ಕೂ ಅವನ ಬೇಡಿಕೆ ಏನೆಂದರೆ ತನ್ನನ್ನು ಒಂಟಿ ಸೆಲ್‌ನಿಂದ ಜನರಲ್ ಸೆಲ್‌ಗೆ ಸ್ಥಳಾಂತರಿಸಬೇಕೆನ್ನುವುದು.
ನಿನ್ನೆಯಿಂದ ಆತ ಅನ್ನ, ನೀರು ಸ್ವೀಕರಿಸಲು ನಿರಾಕರಿಸಿ ಉಪವಾಸ ಕುಳಿತಿದ್ದಾನಂತೆ. ಪ್ರವೀಣ್ ಚೌಗುಲೆಯನ್ನು ಭದ್ರತೆಯ ಕಾರಣಕ್ಕಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿಡಲಾಗಿದೆ. ತಿಂಡಿ, ಊಟ ಮಾಡದೆ ಬೇರೆ ಸೆಲ್‌ಗೆ ವರ್ಗಾಯಿಸಲು ಹಠ ಹಿಡಿದಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ.

2023ರಲ್ಲಿ ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ ಉಡುಪಿಯಲ್ಲಿನ ಮನೆಗೆ ನುಗ್ಗಿ ಹಸೀನಾ (48) ಮತ್ತು ಆಕೆಯ ಮಕ್ಕಳಾದ ಅಫ್ಘಾನ್(23), ಅಸೀಮ್ (12) ಮತ್ತು ಅಯ್ಯಾಜ್ (21) ನನ್ನು ಕೊಲೆ ಮಾಡಿದ್ದನು.

- Advertisement -

Related news

error: Content is protected !!