- Advertisement -
- Advertisement -




ಅಕ್ಟೋಬರ್ 1ರವರೆಗೆ ಭಾರತದಾದ್ಯಂತ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಎಲ್ಲೆಂದರಲ್ಲಿ ಖಾಸಗಿ ಆಸ್ತಿಯನ್ನು ಅನಧಿಕೃತವಾಗಿ ಉರುಳಿಸುವುದನ್ನು ಸುಪ್ರೀಂ ನಿಗದಿತ ಸಮಯದ ವರೆಗೆ ನಿಲ್ಲಿಸುವಂತೆ ಆದೇಶ ನೀಡಿದೆ. ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಎಂದು ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು, ಸಾರ್ವಜನಿಕ ರಸ್ತೆಗಳು, ಕಾಲುದಾರಿಗಳು, ಜಲಮೂಲಗಳು ಮತ್ತು ರೈಲ್ವೆ ಹಳಿಗಳ ಮೇಲಿನ ಅನಧಿಕೃತ ರಚನೆಗಳಿಗೆ ತನ್ನ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸರ್ಕಾರಿ ಭೂಮಿ ಒತ್ತುವರಿ ಆಗಿದ್ದರೆ ತೆರವು ಮಾಡಲು ಅವಕಾಶ ನೀಡಲಾಗುವುದು/ ನಿಯಮದಂತೆ ಅನುಮತಿ ಪಡೆದು ಒತ್ತುವರಿ ತೆರವಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
- Advertisement -